ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್ಎಚ್ಡಿಪಿ) ನಾಲ್ಕನೇ ಹಂತದ ಕಾಮಗಾರಿಗಳಿಗೆ ಯೋಜನಾ ವರದಿ ತಯಾರಿಗೆ ಶೀಘ್ರವಾಗಿ ಗುತ್ತಿಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಪಘಾತ ವಲಯಗಳನ್ನು ಗುರುತಿಸಿ ಸುಧಾರಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಹಾನಿಯಾಗಿರುವ ರಸ್ತೆ, ಸೇತುವೆಗಳನ್ನು ಆದ್ಯತೆ ಮೇರೆಗೆ ದುರಸ್ತಿ ಮಾಡಬೇಕು ಎಂದು ಅವರು ಸೂಚಿಸಿದರು.