ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಪ್ರಸಕ್ತ ಸಾಲಿನಲ್ಲಿ ₹236 ಕೋಟಿ ಅನುದಾನ ಒದಗಿಸಲಾಗಿದೆ. ವಿವಿಧ ಯೋಜನೆಗಳಡಿ 26,395 ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. 60,742 ಅರ್ಜಿಗಳು ಸಲ್ಲಿಕೆಯಾಗಿವೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ₹ 172 ಕೋಟಿ ಅನುದಾನ ಒದಗಿಸಲಾಗಿದೆ. 14,381 ಫಲಾನುಭವಿಗಳಿಗೆ ಸೌಲಭ್ಯ ನೀಡುವ ಗುರಿ ಇದೆ. 43,390 ಅರ್ಜಿಗಳು ಸಲ್ಲಿಕೆಯಾಗಿವೆ. ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ₹108 ಕೋಟಿ ಒದಗಿಸಿದ್ದು, 26,000 ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಗುರಿ ಇದೆ. 59,645 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.