ಬುಧವಾರ, ಮಾರ್ಚ್ 29, 2023
25 °C
‘ಪ್ರಜಾವಾಣಿ’ ವರದಿಗೆ ಸಚಿವ ಮುರುಗೇಶ ನಿರಾಣಿ ಸ್ಪಂದನೆ

KKRDB ಅಧಿಕಾರಿಗಳೊಂದಿಗೆ ಶೀಘ್ರ ಸಭೆ: ‘ಪ್ರಜಾವಾಣಿ’ ವರದಿಗೆ ನಿರಾಣಿ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನೀಡಲಾದ ಅನುದಾನವನ್ನು ಬಹುತೇಕ ಬಳಕೆ ಮಾಡದಿರುವ ಬಗ್ಗೆ ‘ಪ್ರಜಾವಾಣಿ‘ ವರದಿ ಕಣ್ಣು ತೆರೆಸಿದ್ದು, ಇದರ ಬಗ್ಗೆ ಎರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಕಾಮಗಾರಿ ಚುರುಕುಗೊಳಿಸಲು ಸೂಚಿಸುವೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

‘ಅವಧಿ ಮುಗಿದರೂ ಶುರುವಾಗದ ಕಾಮಗಾರಿಗಳನ್ನು ರದ್ದುಪಡಿಸಿ ಕಡಿಮೆ ಅವಧಿಯ ಟೆಂಡರ್ ಮೂಲಕ ಕೆಲಸ ಪೂರ್ಣ ಮಾಡಲು ಸೂಚಿಸಲಾಗುವುದು. ರಾಜ್ಯ ಸರ್ಕಾರ ಈ ಭಾಗದ ಸಮಗ್ರ ಅಭಿವೃದ್ಧಿಗೆ ವರ್ಷಕ್ಕೆ ನೀಡುವ ₹ 3 ಸಾವಿರ ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಳು ಸೂಚಿಸುವೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಮುಂದಿನ ಆರ್ಥಿಕ ವರ್ಷದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಳಿಗೆ ₹ 5 ಸಾವಿರ ಕೋಟಿ ನೀಡಲು ಉದ್ದೇಶಿಸಿದ್ದಾರೆ. ಅದಕ್ಕಾಗಿ ಈಗಿನಿಂದಲೇ ಕ್ರಿಯಾ ಯೋಜನೆ ರೂಪಿಸಲೂ ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು