ಕೋವಿಡ್ ಕಾರಣಕ್ಕೆ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಥೋತ್ಸವ ಯಾವುದೇ ವಿಘ್ನವಿಲ್ಲದೆ ನೆರವೇರಿತು. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ, ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ವಿವಾದವೂ ಈ ಬಾರಿ ಎದ್ದಿತ್ತು. ಆದರೆ, ಜಿಲ್ಲಾಡಳಿತದ ಸೂಚನೆ ಮೇರೆಗೆ ಎಲ್ಲ ಧರ್ಮದವರಿಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಹದಿನೈದಕ್ಕೂ ಹೆಚ್ಚು ಮುಸ್ಲಿಮರು ಅಂಗಡಿ ತೆರೆದು ವ್ಯಾಪಾರ ನಡೆಸಿದರು.