ಬೆಂಗಳೂರು: ಕಾಂಗ್ರೆಸ್ನಲ್ಲಿ ಜಿ–23 ಇದ್ದ ಹಾಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಕೆ–23 ಭಿನ್ನಮತೀಯ ಗ್ಯಾಂಗ್ ಆರಂಭವಾಗುತ್ತಿದ್ದು, ಇದಕ್ಕೆ ಮಾಜಿ ಸಂಸದೆ ರಮ್ಯಾ ಇದಕ್ಕೆ ಮುಹೂರ್ತ ಇಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರದು ಒಂದೊಂದು ಬಾಗಿಲು ಆಗಿದ್ದರೆ, ರಮ್ಯಾ ಮೂರನೇ ಬಾಗಿಲು’ಎಂದರು.