ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ಟವೆಲ್ ಹಾಕಿಲ್ಲ: ಆರ್‌. ಅಶೋಕ

Last Updated 10 ಅಕ್ಟೋಬರ್ 2021, 6:57 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್‌ ಹಾಕಿಲ್ಲ. ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್‌ ತಮಗೆ ಬಿಟ್ಟು ಕೊಡುವಂತೆ ಕೇಳಿದರು. ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆ’ ಎಂದು ಆರ್‌. ಅಶೋಕ ಹೇಳಿದರು.

‘ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಅವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ. ಸೋಮಣ್ಣ ಸರಿಯಾಗಿ ಹೇಳಿದ್ದಾರೆ. ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ. ಅವರು ಸಭೆ ಕರೆದ ಹಿಂದಿನ ದಿನ ಅರ್ಧ ಗಂಟೆ ಮಾತನಾಡಿದ್ದೆವು. ಪೂರ್ವನಿಗದಿತ ಕಾರ್ಯಕ್ರಮ ಅಥವಾ ಪ್ರವಾಸದಲ್ಲಿದ್ದರೆ ಸಭೆಗೆ ಹೋಗಲು ಆಗುವುದಿಲ್ಲ. ಉಳಿದಂತೆ ಶಾಸಕರೇ ಸಭೆ ಕರೆದರೂ ನಾನು ಹೋಗುತ್ತೇನೆ’ ಎಂದು ಹೇಳಿದರು.

‘ನನ್ನ ಇಲಾಖೆಯನ್ನು ಬಿಟ್ಟು ಬೇರೆ ಇಲಾಖೆಗಳ ಕೆಲಸಕ್ಕೆ ನಾನು ತಲೆ ಹಾಕುವುದಿಲ್ಲ. ಬೆಂಗಳೂರಿನಲ್ಲಿ ರಸ್ತೆಗಳ ಗುಂಡಿ ಮುಚ್ಚಿಸಲು ಹೇಳಿದ್ದಾರೆ. ಅದನ್ನಷ್ಟೇ ಮಾಡಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT