<p><strong>ಬೆಂಗಳೂರು</strong>: ‘ನಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಕಣ್ಣೀರಿಗೂ, ಬಿಜೆಪಿ ಅಭ್ಯರ್ಥಿ ಮುನಿರತ್ನ ಸುರಿಸುವ ಕಣ್ಣೀರಿಗೂ ವ್ಯತ್ಯಾಸ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಆರ್.ಆರ್. ನಗರದಲ್ಲಿ ಇತರ ಪಕ್ಷಗಳ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡ ಬಳಿಕ ಮಾತನಾಡಿದ ಅವರು, 'ಕುಸುಮಾ ಅವರು ತಮ್ಮ ಜೀವನ, ಎದುರಾದ ನಷ್ಟ, ನೋವುಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಆದರೆ, ಮುನಿರತ್ನ ತಮಗೆ ಇಂತಹ ಸ್ಥಿತಿ ತಂದುಕೊಂಡೆನಲ್ಲಾ ಎಂದು ಕಣ್ಣೀರು ಹಾಕುತ್ತಿದ್ದಾರೆ’ ಎಂದರು.</p>.<p>‘ಕಾಂಗ್ರೆಸ್ ನನ್ನ ಉಸಿರು, ನನ್ನ ರಕ್ತ ಎಂದು ಹೇಳಿದ್ದ ಮುನಿರತ್ನ ಈಗ ಬಿಜೆಪಿಯಲ್ಲಿ ಮತ ಕೇಳುತ್ತಿದ್ದೇನಲ್ಲ ಎಂದು ನೆನಪಿಸಿಕೊಂಡು ಅಳುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಮುನಿರತ್ನ ಉತ್ತಮ ನಟ, ನಿರ್ಮಾಪಕ ಅಲ್ವಾ. ಜನರು ಕೇಳುವ ಪ್ರಶ್ನೆಗೆ ಉತ್ತರ ಕೊಡಲಾಗದೆ ಕಣ್ಣೀರು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧ ಭಾಷಣ ಮಾಡಿದ್ದರು. ಈಗ ಅವರ ಪಕ್ಷ ಸೇರಿಕೊಂಡು ಚುನಾವಣೆ ಎದುರಿಸಬೇಕಾಗಿದೆಯಲ್ಲ ಎಂದು ಕಣ್ಣೀರು ಹಾಕಿರಬಹುದು’ ಎಂದರು.</p>.<p>‘ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಈ ಹಿಂದೆ ಮುನಿರತ್ನ ಹೇಳುತ್ತಿದ್ದರು. ಈಗ ಶಿವಕುಮಾರ್ ಅವರ ಹಿಂದೆ ಯಾರೂ ಇಲ್ಲ ಎಂದು ಹೇಳುತ್ತಿದ್ದಾರೆ. ಅವರು ಪರಿಸ್ಥಿತಿಗೆ ತಕ್ಕಂತೆ ಅಭಿನಯಿಸುವ ಉತ್ತಮ ನಟ. ಇದನ್ನು ನೋಡುತ್ತಿರುವ ಜನ ದಡ್ಡರಲ್ಲ. ಈಗ ಕಣ್ಣೀರು ಹಾಕಿ ಪ್ರಯೋಜನ ಇಲ್ಲ’ ಎಂದರು.</p>.<p>ಕಪಾಲಿ ಬೆಟ್ಟದ ವಿಷಯವನ್ನು ಬಿಜೆಪಿ ನಾಯಕರು ಪ್ರಸ್ತಾಪಿಸಿದ ಬಗ್ಗೆ ಕೇಳಿದ, ‘ನ. 3ರಂದು ನಡೆಯುವ ಚುನಾವಣೆ ಮುಗಿಯಲಿ. ಆಮೇಲೆ ಧರ್ಮದ ವಿಚಾರ ಮಾತನಾಡೋಣ' ಎಂದರು.</p>.<p>'ಮುನಿರತ್ನ ಅವರ ವಿರುದ್ಧ ಮೋದಿ, ಸದಾನಂದಗೌಡ, ಯಡಿಯೂರಪ್ಪನವರು ಆಡಿದ ಮಾತಿಗೆ ಈಗಲೂ ಬದ್ಧರಾಗಿದ್ದಾರಾ ಎಂಬುದನ್ನು ಕೇಳಿ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಕಣ್ಣೀರಿಗೂ, ಬಿಜೆಪಿ ಅಭ್ಯರ್ಥಿ ಮುನಿರತ್ನ ಸುರಿಸುವ ಕಣ್ಣೀರಿಗೂ ವ್ಯತ್ಯಾಸ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಆರ್.ಆರ್. ನಗರದಲ್ಲಿ ಇತರ ಪಕ್ಷಗಳ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡ ಬಳಿಕ ಮಾತನಾಡಿದ ಅವರು, 'ಕುಸುಮಾ ಅವರು ತಮ್ಮ ಜೀವನ, ಎದುರಾದ ನಷ್ಟ, ನೋವುಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಆದರೆ, ಮುನಿರತ್ನ ತಮಗೆ ಇಂತಹ ಸ್ಥಿತಿ ತಂದುಕೊಂಡೆನಲ್ಲಾ ಎಂದು ಕಣ್ಣೀರು ಹಾಕುತ್ತಿದ್ದಾರೆ’ ಎಂದರು.</p>.<p>‘ಕಾಂಗ್ರೆಸ್ ನನ್ನ ಉಸಿರು, ನನ್ನ ರಕ್ತ ಎಂದು ಹೇಳಿದ್ದ ಮುನಿರತ್ನ ಈಗ ಬಿಜೆಪಿಯಲ್ಲಿ ಮತ ಕೇಳುತ್ತಿದ್ದೇನಲ್ಲ ಎಂದು ನೆನಪಿಸಿಕೊಂಡು ಅಳುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಮುನಿರತ್ನ ಉತ್ತಮ ನಟ, ನಿರ್ಮಾಪಕ ಅಲ್ವಾ. ಜನರು ಕೇಳುವ ಪ್ರಶ್ನೆಗೆ ಉತ್ತರ ಕೊಡಲಾಗದೆ ಕಣ್ಣೀರು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧ ಭಾಷಣ ಮಾಡಿದ್ದರು. ಈಗ ಅವರ ಪಕ್ಷ ಸೇರಿಕೊಂಡು ಚುನಾವಣೆ ಎದುರಿಸಬೇಕಾಗಿದೆಯಲ್ಲ ಎಂದು ಕಣ್ಣೀರು ಹಾಕಿರಬಹುದು’ ಎಂದರು.</p>.<p>‘ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಈ ಹಿಂದೆ ಮುನಿರತ್ನ ಹೇಳುತ್ತಿದ್ದರು. ಈಗ ಶಿವಕುಮಾರ್ ಅವರ ಹಿಂದೆ ಯಾರೂ ಇಲ್ಲ ಎಂದು ಹೇಳುತ್ತಿದ್ದಾರೆ. ಅವರು ಪರಿಸ್ಥಿತಿಗೆ ತಕ್ಕಂತೆ ಅಭಿನಯಿಸುವ ಉತ್ತಮ ನಟ. ಇದನ್ನು ನೋಡುತ್ತಿರುವ ಜನ ದಡ್ಡರಲ್ಲ. ಈಗ ಕಣ್ಣೀರು ಹಾಕಿ ಪ್ರಯೋಜನ ಇಲ್ಲ’ ಎಂದರು.</p>.<p>ಕಪಾಲಿ ಬೆಟ್ಟದ ವಿಷಯವನ್ನು ಬಿಜೆಪಿ ನಾಯಕರು ಪ್ರಸ್ತಾಪಿಸಿದ ಬಗ್ಗೆ ಕೇಳಿದ, ‘ನ. 3ರಂದು ನಡೆಯುವ ಚುನಾವಣೆ ಮುಗಿಯಲಿ. ಆಮೇಲೆ ಧರ್ಮದ ವಿಚಾರ ಮಾತನಾಡೋಣ' ಎಂದರು.</p>.<p>'ಮುನಿರತ್ನ ಅವರ ವಿರುದ್ಧ ಮೋದಿ, ಸದಾನಂದಗೌಡ, ಯಡಿಯೂರಪ್ಪನವರು ಆಡಿದ ಮಾತಿಗೆ ಈಗಲೂ ಬದ್ಧರಾಗಿದ್ದಾರಾ ಎಂಬುದನ್ನು ಕೇಳಿ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>