ಅ. 2ರಂದು ಆರ್.ಆರ್. ನಗರ ಕ್ಷೇತ್ರದ ಪಕ್ಷದ ಮುಖಂಡರ ಸಭೆ ನಡೆಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೂವರು ಸಂಭವನೀಯರ ಹೆಸರನ್ನು ಅಂತಿಮಗೊಳಿಸಿದ್ದರು. ಸೋಮವಾರವೇ ನಾಮಪತ್ರ ಸಲ್ಲಿಸುವುದಾಗಿ ಶನಿವಾರ ಹೇಳಿಕೆ ನೀಡಿದ್ದರು. ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದರೆ ಜೆಡಿಎಸ್ನಿಂದ ಅವಕಾಶ ನೀಡುವ ಸಾಧ್ಯತೆ ಇದೆ. ಇದಕ್ಕಾಗಿ ಅಭ್ಯರ್ಥಿ ಘೋಷಣೆ ಮಾಡದೆ ಕಾಯಲಾಗುತ್ತಿದೆ ಎಂದೂ ಹೇಳಲಾಗುತ್ತಿದೆ.