‘ಈ ಘಟನೆ ಆಘಾತಕಾರಿ ಸಂಗತಿ. ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದು. ಕಾರ್ಮಿಕರು ಬೇಡಿಕೆಗಳು ನ್ಯಾಯಯುತವಾಗಿದ್ದರೆ, ಈ ವಿಷಯವನ್ನು ಕಾರ್ಮಿಕ ಸಂಘಟನೆಗಳ ಮೂಲಕ ಚರ್ಚಿಸಿ ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಕಂಪನಿಯ ಆಡಳಿತ ಮಂಡಳಿ ಮತ್ತು ಸರ್ಕಾರ ಮುಂದಾಗಬೇಕು. ಸೂಕ್ತ ಮಾರ್ಗದಲ್ಲಿ ಪರಿಹಾರ ಕಂಡುಕೊಳ್ಳದೆ, ಇಂಥ ಕೃತ್ಯ ನಡೆದರೆ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಲಿದೆ. ಇಂಥ ಘಟನೆಗಳಿಂದ ಹೂಡಿಕೆದಾರರು ಹಿಂಜರಿಯಬಹುದು. ಹೂಡಿಕೆದಾರರಿದ್ದರೆ ಮಾತ್ರ ಉದ್ಯೋಗಾವಕಾಶ ಸಾಧ್ಯ. ಇಂಥ ಘಟನೆಯಿಂದ ರಾಜ್ಯಕ್ಕೆ ಅರ್ಥಿಕವಾಗಿ ತೀವ್ರ ಹಿನ್ನಡೆ ಆಗಬಹುದು’ ಎಂದೂ ಅವರ ಆತಂಕ ದೇಶಪಾಂಡೆ ವ್ಯಕ್ತಪಡಿಸಿದ್ದಾರೆ.