ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ಹಿಂಪಡೆದ ರವೀಂದ್ರನಾಥ್

Last Updated 6 ನವೆಂಬರ್ 2020, 17:08 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬಡ್ತಿ ನೀಡಲಿಲ್ಲ ಎಂಬ ಕಾರಣಕ್ಕೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಎಡಿಜಿಪಿ ರವೀಂದ್ರನಾಥ್‌ ಅವರು ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ.

ಶುಕ್ರವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವೀಂದ್ರನಾಥ್‌ ಅವರು, ಬಡ್ತಿಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ದೂರು ಹೇಳಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನಿಮಗೆ ಆಗಿರುವ ಅನ್ಯಾಯ ಸರಿಪಡಿಸಲು ಅಧಿಕಾರಿಗಳ ಜತೆ ಮಾತನಾಡುತ್ತೇನೆ, ಮೊದಲು ರಾಜೀನಾಮೆ ಹಿಂದಕ್ಕೆ ಪಡೆಯಿರಿ’ ಎಂದು ಸೂಚಿಸಿದರು.

ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರವೀಂದ್ರನಾಥ್, ‘ಅನ್ಯಾಯ ಸರಿಪಡಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ. ರಾಜೀನಾಮೆ ಹಿಂಪಡೆದಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT