ಬೆಂಗಳೂರು: ‘ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿರುವ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿದ ಕ್ರಿಮಿನಲ್ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ಮುಂದುವರಿದ ವಾದವನ್ನು ಆಲಿಸಲು ಸಮಯಾವಕಾಶ ಕಡಿಮೆ ಇರುವ ಕಾರಣ ನಾನು ಈ ಪ್ರಕರಣದ ವಿಚಾರಣೆಯಿಂದ ಬಿಡುಗಡೆಯಾಗುತ್ತಿದ್ದೇನೆ’ ಎಂದು ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರರಾವ್ ವಿಚಾರಣೆಯಿಂದ ಬಿಡುಗಡೆ ಪಡೆದಿದ್ದಾರೆ.