ಪ್ರತಿಭಟನೆ ನಡೆಸುತ್ತಿರುವ ಕೆಲ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೊವೊಂದನ್ನು ಟ್ವೀಟ್ ಮಾಡಿರುವ ಕೆಪಿಸಿಸಿ, ‘ಕಾಂಗ್ರೆಸ್ನ ಹೋರಾಟದ ಹಾದಿ ಇನ್ನಷ್ಟು ಗಟ್ಟಿಗೊಳ್ಳಲಿದೆ’ ಎಂದು ತಿಳಿಸಿದೆ.
‘ಪ್ರಜಾಪ್ರಭುತ್ವದ ತಳಪಾಯ ಅಲುಗಾಡುತ್ತಿದೆ. ಭಾರತ 75 ವರ್ಷಗಳಲ್ಲಿ ಕಾಪಾಡಿಕೊಂಡು ಬಂದಿದ್ದ ಘನತೆ ಇಂದು ಮಣ್ಣುಪಾಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.