ಚಳ್ಳಕೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ನಡೆದ ರೋಡ್ ಶೋ ಅಂತ್ಯಗೊಳಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 'ಕುಣಿಯಲು ಬಾರದವರು ನೆಲ ಡೊಂಕು ಎಂಬಂತೆ ವಿದೇಶಕ್ಕೆ ತೆರಳಿ ದೇಶದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ತುರ್ತು ಪರಿಸ್ಥಿತಿ ಹೇರಿದ ಇಂದಿರಾಗಾಂಧಿ ಅವರ ಪಕ್ಷದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ' ಎಂದು ತಿರುಗೇಟು ನೀಡಿದರು.