ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ಬಳಿ ಬೈಕ್‌‌ಗೆ ಸರ್ಕಾರಿ ಬಸ್ ಡಿಕ್ಕಿ: ಮೂವರು ಸಾವು

Last Updated 6 ಡಿಸೆಂಬರ್ 2022, 4:05 IST
ಅಕ್ಷರ ಗಾತ್ರ

ಮಸ್ಕಿ (ರಾಯಚೂರು ಜಿಲ್ಲೆ): ತಾಲ್ಲೂಕಿನ ಗುಡದೂರು ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಸರ್ಕಾರಿ‌ ಬಸ್ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಯುವಕ‌ ಗಂಭೀರವಾಗಿ ಗಾಯಗೊಂಡ‌ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಆಂಧ್ರಪ್ರದೇಶದ ನಂದ್ಯಾಲದ ನಾಗರಾಜ (25), ಸೀನು (30) ಜಯಪಾಲ (30) ಮೃತಪಟ್ಟಿದ್ದು, ಶ್ರೀಕಾಂತ ಎನ್ನುವ ಯುವಕನನ್ನು ಚಿಕಿತ್ಸೆಗಾಗಿ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಅಪಘಾತ ಘಟನೆ ಬಳಿಕ ಚಾಲಕನು ನಿಲುಗಡೆ ಮಾಡದೆ, ಲಿಂಗಸುಗೂರಿನತ್ತ ಸಂಚರಿಸಿದ್ದ. ಬಸ್ ಹಿಂಬಾಲಿಸಿಕೊಂಡು ಹೋಗಿದ್ದ ಪಿಎಸ್‌ಐ ಸಿದ್ದರಾಮ‌ ಬಿದರಾಣಿ ಅವರು ಬಸ್ ವಶಕ್ಕೆ ತೆಗೆದುಕೊಂಡಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT