‘ನೀಲಸಂದ್ರ, ಫ್ರೇಜರ್ ಟೌನ್, ಸಂಜಯನಗರ ಸೇರಿದಂತೆ ಒಟ್ಟು 22 ಸ್ಥಳಗಳನ್ನು ಕೆಂಪು ವಲಯವೆಂದು ಗುರುತಿಸಲಾಗಿದೆ. ಈ ಭಾಗದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗುವ ಸಾಧ್ಯತೆ ಇದೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ಹತ್ತಿರದ ಶಾಲೆ ಹಾಗೂ ಇತರ ಸ್ಥಳಗಳಲ್ಲಿ ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಅಲ್ಲಿನ ನಿವಾಸಿಗಳ ಜೊತೆ ನಿರಂತರ ಸಂಪರ್ಕದಲ್ಲಿ ಇರಬೇಕು’ ಎಂದು ತಿಳಿಸಿದರು.