ಅಲ್ಲಿ ರಸಾಯನ ವಿಜ್ಞಾನದ ಪ್ರಯೋಗಾಲಯ ನಡೆಸಲಾಗುತ್ತಿತ್ತು. ವಿದ್ಯಾರ್ಥಿಗಳು 10.30ರ ವೇಳೆಗೆ ಬರುವವರಿದ್ದರು. ಕೊಠಡಿಯಲ್ಲಿ ಬಿರುಕು ಮೂಡಿದ್ದನ್ನು 10.15ರ ಸುಮಾರಿಗೆ ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ ಪ್ರಾಂಶುಪಾಲಡಾ.ಡಿ.ರವಿ ಗಮನಕ್ಕೆ ತಂದಿದ್ದರು. ಕೊಠಡಿಗೆ ಬಂದ ಪ್ರಾಂಶುಪಾಲರು ಬೀಗ ಹಾಕಿಸಿ, ಎಲೆಕ್ಟ್ರಿಕ್ ಸಂಪರ್ಕ ಕಡಿತಗೊಳಿಸಿದ್ದರು. ಎಲ್ಲರೂ ಮೊದಲ ಮಹಡಿಯ ಮೆಟ್ಟಿಲಿಳಿಯುತ್ತಿದ್ದಂತೆಯೇ ಪ್ರಯೋಗಾಲಯದ ಭಾಗವು ಕುಸಿದಿದೆ. ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ.