<p><strong>ಕಾರವಾರ: </strong>ರಾಜ್ಯದ ಕರಾವಳಿಯಲ್ಲಿ ಮಂಗಳವಾರ ಭಾರಿ ಮಳೆಯಿಂದಾಗಿ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಕೊಂಕಣ ರೈಲ್ವೆಯು ಒಂದು ರೈಲಿನ ಸಂಚಾರವನ್ನು ರದ್ದು ಮಾಡಿದೆ. ಮತ್ತೊಂದು ರೈಲಿನ ಸಂಚಾರ ಮೊಟಕುಗೊಂಡಿದ್ದರೆ, ಮತ್ತೆ ಕೆಲವು ವೇಳಾಪಟ್ಟಿ ಪರಿಷ್ಕರಣೆಗೊಳಿಸಲಾಗಿದೆ.</p>.<p>ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಮತ್ತು ಭಟ್ಕಳ ನಿಲ್ದಾಣ ನಡುವೆ ಹಳಿಗಳು ಸಂಪೂರ್ಣವಾಗಿ ಮುಳುಗಿವೆ.</p>.<p><strong>ಮೊಟಕುಗೊಂಡ ಸಂಚಾರ: </strong>ಮಂಗಳೂರು- ಮಡಗಾಂವ್ ವಿಶೇಷ ರೈಲಿನ (06602) ಸಂಚಾರವನ್ನು ಉಡುಪಿ ನಿಲ್ದಾಣದಲ್ಲಿ ಮೊಟಕುಗೊಳಿಸಲಾಗಿದೆ.</p>.<p><strong>ಸಂಚಾರ ರದ್ದು:</strong>ಮಡಗಾಂವ್- ಮಂಗಳೂರು ಸ್ಪೆಷಲ್ ರೈಲು (06601) ಸಂಚಾರವನ್ನು ಸಂಪೂರ್ಣ ರದ್ದು ಪಡಿಸಲಾಗಿದೆ.</p>.<p><strong>ಸಮಯ ಬದಲಾವಣೆ:</strong>ಎರ್ನಾಕುಲಂ- ಪುಣೆ ನಡುವಿನ ಎಕ್ಸ್ಪ್ರೆಸ್ (11098) ರೈಲನ್ನು ಭಟ್ಕಳ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ. ಬೆಂಗಳೂರು- ಕಾರವಾರ ಎಕ್ಸ್ಪ್ರೆಸ್ (16595) ರೈಲು ಶಿರೂರು ನಿಲ್ದಾಣದಲ್ಲಿ ನಿಂತಿದೆ. ಕಾರವಾರ - ಯಶವಂತಪುರ ಎಕ್ಸ್ಪ್ರೆಸ್ ರೈಲನ್ನು ಹೊನ್ನಾವರ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ. ಉಳಿದಂತೆ, ಸೇನಾಪುರ, ಅಂಕೋಲಾ ನಿಲ್ದಾಣಗಳಲ್ಲೂ ತಲಾ ಒಂದು ರೈಲನ್ನು ನಿಲ್ಲಿಸಲಾಗಿದೆ. </p>.<p>ಹಾನಿಯಾದ ಹಳಿಗಳ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಮಧ್ಯಾಹ್ನ 12ರ ವೇಳೆಗೆ ರೈಲುಗಳ ಸಂಚಾರ ಆರಂಭವಾಗುವ ಸಾಧ್ಯತೆಯಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ರಾಜ್ಯದ ಕರಾವಳಿಯಲ್ಲಿ ಮಂಗಳವಾರ ಭಾರಿ ಮಳೆಯಿಂದಾಗಿ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಕೊಂಕಣ ರೈಲ್ವೆಯು ಒಂದು ರೈಲಿನ ಸಂಚಾರವನ್ನು ರದ್ದು ಮಾಡಿದೆ. ಮತ್ತೊಂದು ರೈಲಿನ ಸಂಚಾರ ಮೊಟಕುಗೊಂಡಿದ್ದರೆ, ಮತ್ತೆ ಕೆಲವು ವೇಳಾಪಟ್ಟಿ ಪರಿಷ್ಕರಣೆಗೊಳಿಸಲಾಗಿದೆ.</p>.<p>ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಮತ್ತು ಭಟ್ಕಳ ನಿಲ್ದಾಣ ನಡುವೆ ಹಳಿಗಳು ಸಂಪೂರ್ಣವಾಗಿ ಮುಳುಗಿವೆ.</p>.<p><strong>ಮೊಟಕುಗೊಂಡ ಸಂಚಾರ: </strong>ಮಂಗಳೂರು- ಮಡಗಾಂವ್ ವಿಶೇಷ ರೈಲಿನ (06602) ಸಂಚಾರವನ್ನು ಉಡುಪಿ ನಿಲ್ದಾಣದಲ್ಲಿ ಮೊಟಕುಗೊಳಿಸಲಾಗಿದೆ.</p>.<p><strong>ಸಂಚಾರ ರದ್ದು:</strong>ಮಡಗಾಂವ್- ಮಂಗಳೂರು ಸ್ಪೆಷಲ್ ರೈಲು (06601) ಸಂಚಾರವನ್ನು ಸಂಪೂರ್ಣ ರದ್ದು ಪಡಿಸಲಾಗಿದೆ.</p>.<p><strong>ಸಮಯ ಬದಲಾವಣೆ:</strong>ಎರ್ನಾಕುಲಂ- ಪುಣೆ ನಡುವಿನ ಎಕ್ಸ್ಪ್ರೆಸ್ (11098) ರೈಲನ್ನು ಭಟ್ಕಳ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ. ಬೆಂಗಳೂರು- ಕಾರವಾರ ಎಕ್ಸ್ಪ್ರೆಸ್ (16595) ರೈಲು ಶಿರೂರು ನಿಲ್ದಾಣದಲ್ಲಿ ನಿಂತಿದೆ. ಕಾರವಾರ - ಯಶವಂತಪುರ ಎಕ್ಸ್ಪ್ರೆಸ್ ರೈಲನ್ನು ಹೊನ್ನಾವರ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ. ಉಳಿದಂತೆ, ಸೇನಾಪುರ, ಅಂಕೋಲಾ ನಿಲ್ದಾಣಗಳಲ್ಲೂ ತಲಾ ಒಂದು ರೈಲನ್ನು ನಿಲ್ಲಿಸಲಾಗಿದೆ. </p>.<p>ಹಾನಿಯಾದ ಹಳಿಗಳ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಮಧ್ಯಾಹ್ನ 12ರ ವೇಳೆಗೆ ರೈಲುಗಳ ಸಂಚಾರ ಆರಂಭವಾಗುವ ಸಾಧ್ಯತೆಯಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>