<p><strong>ಬೆಂಗಳೂರು:</strong> ರಾಜ್ಯದ ಹಲವೆಡೆ ಶನಿವಾರ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವಿಗೀಡಾಗಿದ್ದಾರೆ.</p>.<p>ಸಿಡಿಲು ಬಡಿದು ಕಲಬುರ್ಗಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮತ್ತು ಬೀದರ್ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ.</p>.<p>ಅಫಜಲಪುರ ತಾಲ್ಲೂಕಿನ ಬಡದಾಳ ಗ್ರಾಮದ ವ್ಯವಸಾಯ ಸಹಕಾರ ಸಂಘದ ನಿರ್ದೇಶಕ ಭೋಜರಾಜ ಅತನೂರ (54) ಹೂಲದಲ್ಲಿ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.</p>.<p>ಔರಾದ್ತಾಲ್ಲೂಕಿನ ಮೆಡಪಳ್ಳಿ ಗ್ರಾಮದಲ್ಲಿ ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ಅನಿತಾ ಬಸಯ್ಯ ಸ್ವಾಮಿ (35) ಮೃತಪಟ್ಟಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಂಚಿನಾಳ ಗ್ರಾಮದ ಹೊಲವೊಂದರಲ್ಲಿ ಶನಿವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಕುರಿ ಮೇಯಿಸುತ್ತಿದ್ದ ಕೊಡ್ಲಿವಾಡದ ಹನಮಂತ ಕಾರಬಾರಿ (19), ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು. ಎರಡು ಕುರಿಗಳೂ ಮೃತಪಟ್ಟಿವೆ.</p>.<p>ಹಾವೇರಿಯ ಹತ್ತರಗೇರಿ ಓಣಿಯಲ್ಲಿರುವ ಸಾವಳಗಿ ಮಠದ ಸಮೀಪ ಮೂರು ತೆಂಗಿನ ಮರಗಳಿಗೆ ಸಿಡಿಲು ಬಡಿದಿದೆ. ಹುಬ್ಬಳ್ಳಿಯಲ್ಲಿ ಮನೆ ಗೋಡೆ ಕುಸಿದಿದೆ.</p>.<p>ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಹಲವೆಡೆ ಶನಿವಾರ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವಿಗೀಡಾಗಿದ್ದಾರೆ.</p>.<p>ಸಿಡಿಲು ಬಡಿದು ಕಲಬುರ್ಗಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮತ್ತು ಬೀದರ್ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ.</p>.<p>ಅಫಜಲಪುರ ತಾಲ್ಲೂಕಿನ ಬಡದಾಳ ಗ್ರಾಮದ ವ್ಯವಸಾಯ ಸಹಕಾರ ಸಂಘದ ನಿರ್ದೇಶಕ ಭೋಜರಾಜ ಅತನೂರ (54) ಹೂಲದಲ್ಲಿ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.</p>.<p>ಔರಾದ್ತಾಲ್ಲೂಕಿನ ಮೆಡಪಳ್ಳಿ ಗ್ರಾಮದಲ್ಲಿ ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ಅನಿತಾ ಬಸಯ್ಯ ಸ್ವಾಮಿ (35) ಮೃತಪಟ್ಟಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಂಚಿನಾಳ ಗ್ರಾಮದ ಹೊಲವೊಂದರಲ್ಲಿ ಶನಿವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಕುರಿ ಮೇಯಿಸುತ್ತಿದ್ದ ಕೊಡ್ಲಿವಾಡದ ಹನಮಂತ ಕಾರಬಾರಿ (19), ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು. ಎರಡು ಕುರಿಗಳೂ ಮೃತಪಟ್ಟಿವೆ.</p>.<p>ಹಾವೇರಿಯ ಹತ್ತರಗೇರಿ ಓಣಿಯಲ್ಲಿರುವ ಸಾವಳಗಿ ಮಠದ ಸಮೀಪ ಮೂರು ತೆಂಗಿನ ಮರಗಳಿಗೆ ಸಿಡಿಲು ಬಡಿದಿದೆ. ಹುಬ್ಬಳ್ಳಿಯಲ್ಲಿ ಮನೆ ಗೋಡೆ ಕುಸಿದಿದೆ.</p>.<p>ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>