ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಬಿಡುವು ನೀಡಿದ್ದ ಮಳೆ ಮಧ್ಯಾಹ್ನದ ಬಳಿಕ ಬಿಡುವು ಕೊಟ್ಟು ಧಾರಾಕಾರವಾಗಿ ಸುರಿಯುತ್ತಿದೆ.
ತಲಕಾವೇರಿ, ಭಾಗಮಂಡಲ, ಸಂಪಾಜೆ, ಶಾಂತಳ್ಳಿ ಹಾಗೂ ನಾಪೋಕ್ಲು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ.
ಕಾವೇರಿ ನದಿ ಪ್ರವಾಹದಿಂದ ಮೂರ್ನಾಡು – ನಾಪೋಕ್ಲು ಹಾಗೂ ಅಯ್ಯಂಗೇರಿ– ಭಾಗಮಂಡಲ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಆಗಿದೆ.
ಶನಿವಾರಸಂತೆ ಮಾರ್ಗದಲ್ಲಿ ಗಾಳಿಗೆ ಬೃಹತ್ ಮರ ಬಿದ್ದು ಕೆಲಕಾಲ ವಾಹನ ಸಂಚಾರ ಬಂದ್ ಆಗಿತ್ತು. ಹಾರಂಗಿ ಜಲಾಶಯ ಹೊರಹರಿವು ಹೆಚ್ಚಿಸಲಾಗಿದೆ. ಜಿಲ್ಲೆಯ ನದಿಗಳು ಹಾಗೂ ಹಳ್ಳ, ಕೊಳ್ಳಗಳು ಮೈದುಂಬಿ ಹರಿಯುತ್ತಿವೆ.