<p><strong>ಬೆಂಗಳೂರು:</strong> ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.11 ಮತ್ತು 12ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎರಡೂ ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ನೈರುತ್ಯ ಮುಂಗಾರು ಬಿರುಸುಗೊಂಡಿರುವುದರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ವೇಗವಾದ ಗಾಳಿ ಹಾಗೂ ಗರಿಷ್ಠ 3.3 ಮೀಟರ್ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯ ಬಾರದು ಎಂದು ಇಲಾಖೆ ಎಚ್ಚರಿಸಿದೆ.</p>.<p class="Subhead"><strong>ಅಲರ್ಟ್ ಎಲ್ಲೆಲ್ಲಿ ?</strong>:<strong> </strong>ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಹಾಗೂ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿರುವುದಾಗಿ ಇಲಾಖೆ ಮಾಹಿತಿ ನೀಡಿದೆ.</p>.<p>ಮಳೆ-ಎಲ್ಲಿ,ಎಷ್ಟು?: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ 17 ಸೆಂ.ಮೀ ಮಳೆಯಾಗಿದೆ. ಗುಬ್ಬಿ 10, ಆನೇಕಲ್, ಕಂಪ್ಲಿ, ತುಮಕೂರು, ಬೆಂಗಳೂರು 7, ಶಿರಾ, ಹೊಸಕೋಟೆ 6, ಹೊಸಪೇಟೆ 5, ವಿಜಯಪುರ, ಲಿಂಗಸಗೂರು, ರಾಯಚೂರು, ಮದ್ದೂರು, ಬಂಗಾರಪೇಟೆ, ವಿರಾಜಪೇಟೆ 4, ಬೈಲಹೊಂಗಲ, ಚಿಂಚೋಳಿ, ಕಲಬುರ್ಗಿ, ನೆಲಮಂಗಲ, ಕನಕಪುರ, ಹುಣಸೂರು, ಮಾಲೂರು 3, ಪುತ್ತೂರು, ಬೀದರ್, ಸಿಂಧನೂರು, ಗಂಗಾವತಿ, ರಾಮನಗರ, ಪಾಂಡವಪುರ 2, ತಿಪಟೂರು, ಕೊರಟಗೆರೆ, ಭದ್ರಾವತಿ, ಶಿಡ್ಲಘಟ್ಟ, ಕೋಲಾರ, ಗುಂಡ್ಲುಪೇಟೆ, ಕುಣಿಗಲ್, ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.11 ಮತ್ತು 12ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎರಡೂ ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ನೈರುತ್ಯ ಮುಂಗಾರು ಬಿರುಸುಗೊಂಡಿರುವುದರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ವೇಗವಾದ ಗಾಳಿ ಹಾಗೂ ಗರಿಷ್ಠ 3.3 ಮೀಟರ್ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯ ಬಾರದು ಎಂದು ಇಲಾಖೆ ಎಚ್ಚರಿಸಿದೆ.</p>.<p class="Subhead"><strong>ಅಲರ್ಟ್ ಎಲ್ಲೆಲ್ಲಿ ?</strong>:<strong> </strong>ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಹಾಗೂ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿರುವುದಾಗಿ ಇಲಾಖೆ ಮಾಹಿತಿ ನೀಡಿದೆ.</p>.<p>ಮಳೆ-ಎಲ್ಲಿ,ಎಷ್ಟು?: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ 17 ಸೆಂ.ಮೀ ಮಳೆಯಾಗಿದೆ. ಗುಬ್ಬಿ 10, ಆನೇಕಲ್, ಕಂಪ್ಲಿ, ತುಮಕೂರು, ಬೆಂಗಳೂರು 7, ಶಿರಾ, ಹೊಸಕೋಟೆ 6, ಹೊಸಪೇಟೆ 5, ವಿಜಯಪುರ, ಲಿಂಗಸಗೂರು, ರಾಯಚೂರು, ಮದ್ದೂರು, ಬಂಗಾರಪೇಟೆ, ವಿರಾಜಪೇಟೆ 4, ಬೈಲಹೊಂಗಲ, ಚಿಂಚೋಳಿ, ಕಲಬುರ್ಗಿ, ನೆಲಮಂಗಲ, ಕನಕಪುರ, ಹುಣಸೂರು, ಮಾಲೂರು 3, ಪುತ್ತೂರು, ಬೀದರ್, ಸಿಂಧನೂರು, ಗಂಗಾವತಿ, ರಾಮನಗರ, ಪಾಂಡವಪುರ 2, ತಿಪಟೂರು, ಕೊರಟಗೆರೆ, ಭದ್ರಾವತಿ, ಶಿಡ್ಲಘಟ್ಟ, ಕೋಲಾರ, ಗುಂಡ್ಲುಪೇಟೆ, ಕುಣಿಗಲ್, ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>