ಬೆಂಗಳೂರು: ರಾಜ್ಯದಲ್ಲಿ ಶನಿವಾರ ಮಳೆ ಅಬ್ಬರ ತಗ್ಗಿದೆ. ಆದರೆ, ಬೆಳಗಾವಿ, ಬಾಗಲಕೋಟೆ, ಉತ್ತರಕನ್ನಡ, ಗದಗ, ಹಾವೇರಿ, ವಿಜಯಪುರ, ಶಿವಮೊಗ್ಗ ಜಿಲ್ಲೆ ಗಳಲ್ಲಿ ನದಿಗಳಿಗೆ ಹೆಚ್ಚಿನ ನೀರು ಹರಿದುಬರುತ್ತಿರುವುದು ಮತ್ತು ಜಲಾಶಯಗ ಳಿಂದ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವ ಪರಿಣಾಮ ತೀರದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ.