ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಗ್ಗಿದ ಪ್ರವಾಹ: ರಕ್ಷಣಾ ಕಾರ್ಯ ಚುರುಕು

Last Updated 19 ಅಕ್ಟೋಬರ್ 2020, 21:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಸೋಮವಾರ ಸ್ವಲ್ಪ ಇಳಿಕೆಯಾಗಿದ್ದರೂ ಹೊಲ, ಮನೆಗಳಿಗೆ ನುಗ್ಗಿರುವ ನೀರು ಪೂರ್ಣವಾಗಿ ಖಾಲಿಯಾಗಿಲ್ಲ. ಎಂಟು ಗ್ರಾಮಗಳ ವ್ಯಾಪ್ತಿಯಲ್ಲಿ 327 ಮನೆಗಳು ಜಲಾವೃತವಾಗಿವೆ. ಜಲಾವೃತವಾಗಿರುವ ಮನೆಗಳಲ್ಲಿ ಇದ್ದ 121 ಜನರನ್ನು ರಕ್ಷಣೆ ಮಾಡಲಾಗಿದೆ.

1,844 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಭೀಮಾ ನದಿ ತೀರದ ಚಡಣಚ, ಇಂಡಿ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಸದ್ಯ 39 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 4,431 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದರು.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ ಹಾಗೂ ಹೊಸಪೇಟೆಯ ಸುತ್ತಮುತ್ತ ಮಳೆಯಾಗಿದೆ. ಕೃಷ್ಣಾ ನದಿಗೆ ನಿರ್ಮಿಸಿರುವ ಕಲ್ಲೋಳ–ಯಡೂರ ಹಾಗೂ ದೂಧ್‌ಗಂಗಾ ನದಿಗೆ ಕಟ್ಟಿರುವ ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ–ದತ್ತವಾಡ ಸೇತುವೆ ಕಂ ಬ್ಯಾರೇಜ್‌ಗಳು ಸಂಚಾರಕ್ಕೆ ಮುಕ್ತವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT