ಯಾದಗಿರಿ ಜಿಲ್ಲೆ ಕೆಂಭಾವಿ, ಹುಣಸಗಿ, ಕಲಬುರ್ಗಿ ಜಿಲ್ಲೆಯ ವಾಡಿಯಲ್ಲಿ ಗಾಳಿಗೆ ಮನೆಗಳ ಹೆಂಚು ಹಾರಿವೆ. ಕೊಪ್ಪಳ ಜಿಲ್ಲೆ ಹನಮಸಾಗರದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಹಾಗೂ ಸುತ್ತಮುತ್ತ ಬಾಳೆ, ಮಾವು, ನುಗ್ಗೆ ಗಿಡಗಳು ನೆಲಕ್ಕುರುಳಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಪಡೆದಿದೆ.