‘ಇಂಥದ್ದೊಂದು ಕಾರ್ಯಕ್ರಮಕ್ಕೆ ಸಚಿವರು ಈ ಹಿಂದೆಯೇ ಚಿಂತನೆ ನಡೆಸಿದ್ದರು. ಚಾಮರಾಜನಗರ ಜಿಲ್ಲೆಯ ರೈತರೊಬ್ಬರ ಮನೆಯಲ್ಲಿ ವಾಸ್ತವ್ಯ ಹೂಡಿ, ಸಮಸ್ಯೆಗಳಿಗೆ ಧ್ವನಿಯಾಗಲು ನಿರ್ಧರಿಸಿದ್ದರು. ಆದರೆ, ಕೋವಿಡ್ನಿಂದಾಗಿ ಯೋಜನೆ ಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಮತ್ತೆ ಈ ಬಗ್ಗೆ ಚಿಂತನೆ ನಡೆಸಿದ್ದಾರೆ’ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ.