ಮೈಸೂರು: ‘ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕಾಗಿ ರಚಿಸಿರುವ ಶೋಧನಾ ಸಮಿತಿಯ ಮುಖ್ಯಸ್ಥರಾಗಿ ಎಂಜಿನಿಯರಿಂಗ್ ಮೂಲದವರಾದ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನು ನಾಮನಿರ್ದೇಶನ ಮಾಡಿರುವ ರಾಜ್ಯ ಸರ್ಕಾರದ ನಡೆ ಸರಿಯಲ್ಲ’ ಎಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆಯ (ಎಫ್ವಿಸಿಕೆ) ಅಧ್ಯಕ್ಷ ಪ್ರೊ.ಕೆ.ಎಸ್.ರಂಗಪ್ಪ ಬೇಸರ ವ್ಯಕ್ತಪಡಿಸಿದರು.