ಸಾಕಷ್ಟು ಭಿನ್ನಾಭಿಪ್ರಾಯಗಳ ನಡುವೆಯೂ ಹಿಂದೆ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಿತ್ತು. ಈಗ ಪಕ್ಷದ ನಾಯಕರ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಜಾತ್ಯತೀತ ಸಿದ್ಧಾಂತ ಉಳಿಸಿಕೊಳ್ಳಲು ಜೆಡಿಎಸ್ ಈ ಬಾರಿ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮನವಿ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ. ಅದೇ ರೀತಿ ಜೆಡಿಎಸ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲಿ ಎಂದು ಮನವಿ ಮಾಡುತ್ತೇನೆ ಎಂದರು.