ಜೆಡಿಎಸ್ನ ಎಚ್.ಡಿ.ರೇವಣ್ಣ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಮತ ತೋರಿಸಿದರು ಎಂಬ ಕಾರಣಕ್ಕೆ ಅವರ ಮತವನ್ನು ಅಸಿಂಧುಗೊಳಿಸಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಚುನಾವಣಾಧಿಕಾರಿ ಮತವನ್ನು ಸಿಂಧುಗೊಳಿಸಿದರೂ ಸಮಾಧಾನಗೊಳ್ಳದ ಕಾಂಗ್ರೆಸ್ ಪಕ್ಷ, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಆಯೋಗವು ಅಭಿಪ್ರಾಯವನ್ನು ನೀಡುವವರೆಗೆ ಮತಗಳ ಎಣಿಕೆಯನ್ನು ತಡೆ ಹಿಡಿಯಲಾಗಿತ್ತು.