‘ಸಿದ್ದರಾಮಯ್ಯ ಯಾರ ಪರ ಇರುತ್ತಾರೆ ಎಂಬುದೇ ಗೊತ್ತಾಗುವುದಿಲ್ಲ. ವೀರಶೈವ ಮತ್ತು ಲಿಂಗಾಯತ ಸಮುದಾಯದವರನ್ನು ಒಡೆದರು. ಗೋ ಹತ್ಯೆ ನಿಷೇಧ ವಿರೋಧಿಸಿದರು. ಅವರು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ಕಾಂಗ್ರೆಸ್ನ ಮುಸ್ಲಿಂ ಅಭ್ಯರ್ಥಿ ಮನ್ಸೂರ್ ಅವರ ಸೋಲಿಗೆ ಕಾರಣರಾದ ಸಿದ್ದರಾಮಯ್ಯ ಮುಸ್ಲಿಂ ಸಮುದಾಯಕ್ಕೆ ದ್ರೋಹ ಬಗೆದಿರುವುದನ್ನು ಆ ಸಮುದಾಯ ಅರ್ಥ ಮಾಡಿಕೊಳ್ಳಬೇಕು’ ಎಂದರು.
‘ನೂರಾರು ಕೋಟಿ ರೂಪಾಯಿ ವಹಿವಾಟು’
ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ವಹಿವಾಟು ನಡೆದಿದೆ. ಸಿದ್ದರಾಮಯ್ಯ ಅವರ ಜಾತ್ಯತೀತ ಸಿದ್ಧಾಂತದ ಬಣ್ಣ ಬಯಲಾಗಿದೆ. ಈಗ ಅವರು ರಾಜ್ಯದ ಜನರ ಮುಂದೆ ಬೆತ್ತಲಾಗಿದ್ದಾರೆ. ಅಡ್ಡ ಮತದಾನ ಮಾಡಿ ರುವ ಶ್ರೀನಿವಾಸ ಗೌಡ ಮತ್ತು ಎಸ್.ಆರ್. ಶ್ರೀನಿವಾಸ್ ವಿರುದ್ಧ ವಿಧಾನಸಭೆ ಅಧ್ಯಕ್ಷರಿಗೆ ದೂರು ನೀಡುತ್ತೇನೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.