ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಚಿತ್ರನಟ ಜಗ್ಗೇಶ್, ವಿಧಾನ ಪರಿಷತ್ನ ಮಾಜಿ ಸದಸ್ಯ ಲಹರ್ ಸಿಂಗ್ ಸಿರೋಯ, ಕಾಂಗ್ರೆಸ್ನಿಂದ ರಾಜ್ಯಸಭೆಯ ಹಾಲಿ ಸದಸ್ಯ ಜೈರಾಂ ರಮೇಶ್, ಪಕ್ಷದ ಹಿರಿಯ ಮುಖಂಡ ಕೆ. ರೆಹಮಾನ್ ಖಾನ್ ಅವರ ಮಗ ಮನ್ಸೂರ್ ಅಲಿ ಖಾನ್ ಅಭ್ಯರ್ಥಿಗಳಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ರಾಜ್ಯಸಭೆಯ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.