ಬೆಂಗಳೂರು: ದೇಶದ ಸುಪ್ರೀಂ ಕೋರ್ಟ್ ಮೇಲಿನ ಒತ್ತಡ ಕಡಿಮೆಯಾಗಬೇಕು ಎಂದರೆ ದೇಶದ ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ ಸುಪ್ರೀಂಕೋರ್ಟ್ನ ಪೀಠಗಳು ಸ್ಥಾಪನೆಯಾಗಬೇಕು. ದಕ್ಷಿಣದಲ್ಲಿ ‘ಸುಪ್ರೀಂ’ ಪೀಠ ಸ್ಥಾಪಿಸಲು ಬೆಂಗಳೂರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಕೇಂದ್ರ ಕಾನೂನು ಸಚಿವರಲ್ಲಿ ಮನವಿ ಮಾಡಿದರು.