ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನನ್ನ ಮೇಲೆ ವಿಶ್ವಾಸ, ನಂಬಿಕೆ ಇಟ್ಟು ಈ ಹುದ್ದೆ ಕೊಟ್ಟಿದ್ದಾರೆ. ಇದು ನನಗೆ ಕೊಟ್ಟ ಗೌರವ. ಇದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಹುದ್ದೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತೇವೆ’ ಎಂದರು.