ಸಾಮಾನ್ಯ ಕಾರ್ಯಕರ್ತರಾಗಿದ್ದ ಅಶೋಕ ಗಸ್ತಿ ಅವರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಸದಸ್ಯ ಸ್ಥಾನ ನೀಡಿತ್ತು. ಇದು ಕಲ್ಯಾಣ ಕರ್ನಾಟಕಕ್ಕೆ ಸಿಕ್ಕ ಅವಕಾಶವೂ ಆಗಿತ್ತು. ಆದರೆ, ಗಸ್ತಿ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿ, ಸಂಸತ್ತಿನ ಒಂದು ಅಧಿವೇಶನಕ್ಕೆ ಮಾತ್ರ ಹಾಜರಾಗಿದ್ದರು. ಕೋವಿಡ್ನಿಂದಾಗಿ ಮೃತಪಟ್ಟರು.