ಇಂಧನ ಇಲಾಖೆಯನ್ನು ಪರಿಸರ ಸ್ನೇಹಿಯಾಗಿಸುವುದರ ಜತೆಗೆ, ಆಡಳಿತದಲ್ಲಿ ಜನಸ್ನೇಹಿ ನೀತಿಗಳಿಗೆ ಒತ್ತು ನೀಡಲಾಗುವುದು. ಗ್ರಾಹಕರು, ರೈತರು ಹಾಗೂ ಉದ್ಯಮಿಗಳಿಗೆ ಪೂರಕವಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಿನ 100 ದಿನಗಳಲ್ಲಿ ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಕುರಿತು ಸೆ.10ರಂದು ಕ್ರಿಯಾಯೋಜನೆ ತಯಾರಿಸಲಾಗುವುದು ಎಂದರು ಸಚಿವ ಸುನಿಲ್ ಕುಮಾರ್ ಹೇಳಿದರು.