‘ಕೋವಿಡ್ ಮತ್ತು ಪ್ರವಾಹದ ಕಾರಣದಿಂದಾಗಿ ಈ ಬಾರಿ ಪ್ರಶಸ್ತಿಗಳನ್ನು ನೀಡುವುದು ಬೇಡ ಎಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಈ ವರ್ಷ ಪ್ರಶಸ್ತಿ ಪ್ರಕಟಿಸದೇ ಬಾಕಿ ಉಳಿಸಿಕೊಂಡರೆ ಅದಕ್ಕೂ ಟೀಕೆ ಎದುರಿಸಬೇಕಾಗುತ್ತದೆ. ಅಲ್ಲದೆ, ಮುಂದಿನ ವರ್ಷ ಪ್ರಶಸ್ತಿಗಳ ಸಂಖ್ಯೆಯನ್ನೂ ಹೆಚ್ಚಿಸಬೇಕಾಗುತ್ತದೆ. ಈ ಕಾರಣಕ್ಕೆ ಪ್ರಶಸ್ತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.