ಕೋವಿಡ್ ಪ್ರಕರಣಗಳು ಹೆಚ್ಚಿದ ಬೆನ್ನಲ್ಲಿಯೇ ರಾಜ್ಯದಲ್ಲಿ ರಂಗ ಮಂದಿರಗಳನ್ನು ಮುಚ್ಚಲಾಗಿತ್ತು. ಸರ್ಕಾರವು ಕಳೆದ ತಿಂಗಳು ರಂಗ ಮಂದಿರಗಳ ಪುನರಾರಂಭಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿತ್ತು. ಹೀಗಾಗಿ 7 ತಿಂಗಳ ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಮೊದಲ ಕಾರ್ಯಮ ನಡೆಯುತ್ತಿದ್ದು, ವೇದಿಕೆಯನ್ನು ವಿವಿಧ ಬಗೆಯ ಹೂವುಗಳಿಂದ ಶೃಂಗಾರ ಮಾಡಲಾಗಿದೆ. ಆಸನಗಳ ನಡುವೆ ಪರಸ್ಪರ ಅಂತರ ಕಾಯ್ದುಕೊಳ್ಳುವ ಸಂಬಂಧ ಗುರುತು ಮಾಡಲಾಗಿದೆ.