‘ಸ್ಪರ್ಧೆಗೆ ಅವಕಾಶ ನೀಡಿದ್ದರಿಂದ ಹೆಚ್ಚು ಮತ ಪಡೆದಿದ್ದು, ನನ್ನ ಆಯ್ಕೆಯನ್ನು ಮಾನ್ಯ ಮಾಡಬೇಕು’ ಎಂದು ರಾಷ್ಟ್ರೀಯ ಘಟಕಕ್ಕೆ ನಲಪಾಡ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಉಸ್ತುವಾರಿ ಕೃಷ್ಣ ಅಲ್ಲವಾರು ನೇತೃತ್ವದಲ್ಲಿ ಜೂನ್ 21ರಿಂದ ಮೂರು ದಿನಗಳ ಕಾಲ ದೆಹಲಿ ಹಾಗೂ ಬೆಂಗಳೂರಿನಲ್ಲಿ ಸಂಧಾನ ಸಭೆ ಏರ್ಪಡಿಸಲಾಗಿತ್ತು.