<p><strong>ನವದೆಹಲಿ</strong>: ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ 2022ರ ಜನವರಿ 31ರವರೆಗೆ ಯುವ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿ ಸೋಮವಾರ ಆದೇಶ ಹೊರಡಿಸಿರುವ ಪಕ್ಷದ ರಾಷ್ಟ್ರೀಯ ಯುವ ಘಟಕ, ಈ ಸಂಬಂಧ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.</p>.<p>ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸೋಮವಾರ ಈ ಆದೇಶ ಹೊರಡಿಸಿದ್ದಾರೆ.</p>.<p>ಇತ್ತೀಚೆಗೆ ನಡೆಸಲಾದ ಸಂಧಾನ ಸಭೆಗಳಲ್ಲಿ ಕೈಗೊಂಡ ನಿರ್ಣಯದ ಪ್ರಕಾರ ರಕ್ಷಾ ಅವರು ಜನವರಿ 31ಕ್ಕೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕಿದೆ.</p>.<p>ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಜನವರಿ 31ರಂದು ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ ಎಂದು ಆದೇಶ ಹೇಳಿದೆ.</p>.<p>ಹಲ್ಲೆಯಂತಹ ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಮೊಹಮ್ಮದ್ ನಲಪಾಡ್ಗೆ ಚುನಾವಣೆಯಲ್ಲಿ ಅಧಿಕ ಮತ ಲಭಿಸಿದ್ದರೂ ಅಧ್ಯಕ್ಷ ಸ್ಥಾನ ದೊರೆತಿರಲಿಲ್ಲ. ಮತ ಗಳಿಕೆಯಲ್ಲಿ 2ನೇ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರಿಗೇ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು.</p>.<p>‘ಸ್ಪರ್ಧೆಗೆ ಅವಕಾಶ ನೀಡಿದ್ದರಿಂದ ಹೆಚ್ಚು ಮತ ಪಡೆದಿದ್ದು, ನನ್ನ ಆಯ್ಕೆಯನ್ನು ಮಾನ್ಯ ಮಾಡಬೇಕು’ ಎಂದು ರಾಷ್ಟ್ರೀಯ ಘಟಕಕ್ಕೆ ನಲಪಾಡ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಉಸ್ತುವಾರಿ ಕೃಷ್ಣ ಅಲ್ಲವಾರು ನೇತೃತ್ವದಲ್ಲಿ ಜೂನ್ 21ರಿಂದ ಮೂರು ದಿನಗಳ ಕಾಲ ದೆಹಲಿ ಹಾಗೂ ಬೆಂಗಳೂರಿನಲ್ಲಿ ಸಂಧಾನ ಸಭೆ ಏರ್ಪಡಿಸಲಾಗಿತ್ತು.</p>.<p>ರಕ್ಷಾ ಅವರು ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಮ್ಮತಿ ಸೂಚಿಸದ್ದರಿಂದ ಗೊಂದಲ ಮುಂದುವರಿದಿತ್ತು. ಆದರೆ, ರಾಷ್ಟ್ರೀಯ ಘಟಕವು ಮಧ್ಯಸ್ಥಿಕೆವಹಿಸುವ ಮೂಲಕ ಸಂಧಾನ ಏರ್ಪಡಿಸಿ ಅಂತಿಮ ನಿರ್ಧಾರ ಪ್ರಕಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ 2022ರ ಜನವರಿ 31ರವರೆಗೆ ಯುವ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿ ಸೋಮವಾರ ಆದೇಶ ಹೊರಡಿಸಿರುವ ಪಕ್ಷದ ರಾಷ್ಟ್ರೀಯ ಯುವ ಘಟಕ, ಈ ಸಂಬಂಧ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.</p>.<p>ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸೋಮವಾರ ಈ ಆದೇಶ ಹೊರಡಿಸಿದ್ದಾರೆ.</p>.<p>ಇತ್ತೀಚೆಗೆ ನಡೆಸಲಾದ ಸಂಧಾನ ಸಭೆಗಳಲ್ಲಿ ಕೈಗೊಂಡ ನಿರ್ಣಯದ ಪ್ರಕಾರ ರಕ್ಷಾ ಅವರು ಜನವರಿ 31ಕ್ಕೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕಿದೆ.</p>.<p>ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಜನವರಿ 31ರಂದು ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ ಎಂದು ಆದೇಶ ಹೇಳಿದೆ.</p>.<p>ಹಲ್ಲೆಯಂತಹ ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಮೊಹಮ್ಮದ್ ನಲಪಾಡ್ಗೆ ಚುನಾವಣೆಯಲ್ಲಿ ಅಧಿಕ ಮತ ಲಭಿಸಿದ್ದರೂ ಅಧ್ಯಕ್ಷ ಸ್ಥಾನ ದೊರೆತಿರಲಿಲ್ಲ. ಮತ ಗಳಿಕೆಯಲ್ಲಿ 2ನೇ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರಿಗೇ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು.</p>.<p>‘ಸ್ಪರ್ಧೆಗೆ ಅವಕಾಶ ನೀಡಿದ್ದರಿಂದ ಹೆಚ್ಚು ಮತ ಪಡೆದಿದ್ದು, ನನ್ನ ಆಯ್ಕೆಯನ್ನು ಮಾನ್ಯ ಮಾಡಬೇಕು’ ಎಂದು ರಾಷ್ಟ್ರೀಯ ಘಟಕಕ್ಕೆ ನಲಪಾಡ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಉಸ್ತುವಾರಿ ಕೃಷ್ಣ ಅಲ್ಲವಾರು ನೇತೃತ್ವದಲ್ಲಿ ಜೂನ್ 21ರಿಂದ ಮೂರು ದಿನಗಳ ಕಾಲ ದೆಹಲಿ ಹಾಗೂ ಬೆಂಗಳೂರಿನಲ್ಲಿ ಸಂಧಾನ ಸಭೆ ಏರ್ಪಡಿಸಲಾಗಿತ್ತು.</p>.<p>ರಕ್ಷಾ ಅವರು ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಮ್ಮತಿ ಸೂಚಿಸದ್ದರಿಂದ ಗೊಂದಲ ಮುಂದುವರಿದಿತ್ತು. ಆದರೆ, ರಾಷ್ಟ್ರೀಯ ಘಟಕವು ಮಧ್ಯಸ್ಥಿಕೆವಹಿಸುವ ಮೂಲಕ ಸಂಧಾನ ಏರ್ಪಡಿಸಿ ಅಂತಿಮ ನಿರ್ಧಾರ ಪ್ರಕಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>