<p><strong>ಧಾರವಾಡ:</strong> ‘ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರುದ್ಧ ಕನ್ನಡಪರ ಸಂಘಟನೆಗಳು ಹಾಗೂ ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್ ಬೆಂಬಲಿಸಿ ಬೀದಿಗಿಳಿಯುವವರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಲಾಗುವುದು’ ಎಂದು ರಾಮ್ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಕದಂ ಹೇಳಿದರು.</p>.<p>‘ಕರ್ನಾಟಕದಲ್ಲೇ ಹುಟ್ಟಿ ಬೆಳೆದಿರುವ ಮರಾಠಿಗರಿಗಾಗಿ ಸರ್ಕಾರ ಪ್ರಾಧಿಕಾರ ರಚಿಸಿದರೆ ತಪ್ಪೇನು? ಮರಾಠಿಗರು ಕೇವಲ ಮಹಾರಾಷ್ಟ್ರದಲ್ಲಿ ಮಾತ್ರವಲ್ಲ, ಕರ್ನಾಟಕದಲ್ಲೂ ಇದ್ದಾರೆ. ಇಂಥ ಕನ್ನಡ ಪರ ಹೋರಾಟಗಾರರು ಇತರ ಭಾಷಿಗರ ಕುರಿತು ಏಕೆ ಮೌನ ವಹಿಸಿದ್ದಾರೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಹಿಂದೂ ಸಂಘಟನೆಗೆ ಶಿವಾಜಿ ಸೇರಿದಂತೆ ಇತರರ ಕೊಡುಗೆ ದೊಡ್ಡದಿದೆ. ಒಂದೊಮ್ಮೆ ನಮ್ಮ ಎಚ್ಚರಿಕೆಯನ್ನೂ ಕಡೆಗಣಿಸಿ ಬೀದಿಗಿಳಿದರೆ ನಾವೂ ಬೆಂಗಳೂರು ಚಲೋಗೆ ಕರೆ ನೀಡುತ್ತೇವೆ, ವಾಟಾಳ್ ನಾಗರಾಜ್ ಮನೆಗೆ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರುದ್ಧ ಕನ್ನಡಪರ ಸಂಘಟನೆಗಳು ಹಾಗೂ ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್ ಬೆಂಬಲಿಸಿ ಬೀದಿಗಿಳಿಯುವವರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಲಾಗುವುದು’ ಎಂದು ರಾಮ್ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಕದಂ ಹೇಳಿದರು.</p>.<p>‘ಕರ್ನಾಟಕದಲ್ಲೇ ಹುಟ್ಟಿ ಬೆಳೆದಿರುವ ಮರಾಠಿಗರಿಗಾಗಿ ಸರ್ಕಾರ ಪ್ರಾಧಿಕಾರ ರಚಿಸಿದರೆ ತಪ್ಪೇನು? ಮರಾಠಿಗರು ಕೇವಲ ಮಹಾರಾಷ್ಟ್ರದಲ್ಲಿ ಮಾತ್ರವಲ್ಲ, ಕರ್ನಾಟಕದಲ್ಲೂ ಇದ್ದಾರೆ. ಇಂಥ ಕನ್ನಡ ಪರ ಹೋರಾಟಗಾರರು ಇತರ ಭಾಷಿಗರ ಕುರಿತು ಏಕೆ ಮೌನ ವಹಿಸಿದ್ದಾರೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಹಿಂದೂ ಸಂಘಟನೆಗೆ ಶಿವಾಜಿ ಸೇರಿದಂತೆ ಇತರರ ಕೊಡುಗೆ ದೊಡ್ಡದಿದೆ. ಒಂದೊಮ್ಮೆ ನಮ್ಮ ಎಚ್ಚರಿಕೆಯನ್ನೂ ಕಡೆಗಣಿಸಿ ಬೀದಿಗಿಳಿದರೆ ನಾವೂ ಬೆಂಗಳೂರು ಚಲೋಗೆ ಕರೆ ನೀಡುತ್ತೇವೆ, ವಾಟಾಳ್ ನಾಗರಾಜ್ ಮನೆಗೆ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>