ನಗರದಲ್ಲಿ 28ನೇ ಚಾತುರ್ಮಾಸ್ಯ ವ್ರತ ಕೈಗೊಳ್ಳುವ ವೇಳೆ ಶನಿವಾರ ಧಾರ್ಮಿಕ ಪ್ರವಚನ ನೀಡಿದ ಅವರು, ‘ಸೈನ್ಯ, ಕೋಶ ಅಥವಾ ಜನಸ್ತೋಮ ಇಲ್ಲದೆಯೇ ಶಂಕರಾಚಾರ್ಯರು ತಮ್ಮ ಜ್ಞಾನ ಪ್ರಭೆಯಿಂದ ಅಖಂಡ ಭಾರತದ ಪುನರುತ್ಥಾನ ಮಾಡಿದರು. ಅದೇ ರೀತಿ, ವಿಷ್ಣುಗುಪ್ತ ವಿಶ್ವವಿದ್ಯಾಪೀಠವು ಪ್ರಾಚೀನ ಜ್ಞಾನಪರಂಪರೆಯ ತಳಹದಿಯಲ್ಲಿ ದೇಶದ ಪುನರ್ನಿರ್ಮಾಣದತ್ತ ದೃಷ್ಟಿ ನೆಟ್ಟಿದೆ. ವಾಸ್ತು, ಆಯುರ್ವೇದ, ವೃಕ್ಷಾಯುರ್ವೇದ, ಸಾಮವೇದದಂಥ ಅಳಿವಿನ ಅಂಚಿನಲ್ಲಿರುವ ಹಲವು ವಿದ್ಯೆಗಳ ಪುನರುತ್ಥಾನ ಇಲ್ಲಿ ನಡೆಯಲಿದೆ’ ಎಂದರು.