ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ರಾಮಕೃಷ್ಣ ಮಠದ ಅತ್ಯಂತ ಹಿರಿಯ ಸನ್ಯಾಸಿಯಾಗಿದ್ದರು. 1989ರಿಂದ ಬೆಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದರು. ರಾಮಕೃಷ್ಣ ಮಠದ ಆರನೇ ಅಧ್ಯಕ್ಷರಾದ ಸ್ವಾಮಿ ವಿರಾಜನಂದರಿಂದ ಮಂತ್ರದೀಕ್ಷೆಯನ್ನು ಪಡೆದಿದ್ದರು. 1962ರಲ್ಲಿ ಮಠದ 8ನೇ ಅಧ್ಯಕ್ಷರಾಗಿದ್ದ ಸ್ವಾಮಿ ವಿಶುದ್ಧಾನಂದರಲ್ಲಿ ಸನ್ಯಾಸಿ ದೀಕ್ಷೆಯನ್ನು ಸ್ವೀಕರಿಸಿದ್ದರು. ಮಂಗಳೂರು, ಮೈಸೂರು, ಬೇಲೂರು ಮಠ ಮತ್ತು ಅಲ್ಲಹಾಬಾದ್ ರಾಮಕೃಷ್ಣ ಮಠಗಳಲ್ಲೂ ಇವರು ಕಾರ್ಯ ನಿರ್ವಹಿಸಿದ್ದರು.