<p><strong>ಬೆಳಗಾವಿ:</strong> ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು. ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಈ ಸಂಬಂಧ ಚರ್ಚಿಸಲಾಗುವುದು’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ರಾಷ್ಟ್ರೀಯ ಅಧ್ಯಕ್ಷರೂ ಆದ, ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿದರು.</p>.<p>ಇಲ್ಲಿನ ಗಾಂಧಿ ಭವನದಲ್ಲಿ ಆರ್ಪಿಐ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಕಾರ್ಯಕಾರಿಣಿ ಹಾಗೂ ಬೆಳಗಾವಿ ಜಿಲ್ಲಾ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ 6 ದಶಕ ಆಡಳಿತ ನಡೆಸಿದ ಕಾಂಗ್ರೆಸ್ನವರು ಜಾತೀಯತೆ ಹೋಗಲಾಡಿಸಲಿಲ್ಲ. ಗಾಂಧೀಜಿ ಕನಸು ನುಚ್ಚುನೂರಾಗಿಸಿದರು. ಮೋದಿ ಪ್ರಧಾನಿಯಾದ ನಂತರ ಭ್ರಷ್ಟಾಚಾರ ನಿರ್ಮೂಲನೆಗೊಳಿಸಿದ್ದಾರೆ. ಹಾಗಾಗಿ ನಾವೂ ಬಿಜೆಪಿ ಜೊತೆಗಿದ್ದೇವೆ’ ಎಂದರು.</p>.<p>‘ರಾಜ್ಯದಲ್ಲಿಯೂ ಪಕ್ಷ ಸಂಘಟನೆಗೆ ಒತ್ತು ನೀಡಿದ್ದೇವೆ. ಕಾರ್ಯಕರ್ತರು ತಮಗೆ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು. ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಈ ಸಂಬಂಧ ಚರ್ಚಿಸಲಾಗುವುದು’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ರಾಷ್ಟ್ರೀಯ ಅಧ್ಯಕ್ಷರೂ ಆದ, ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿದರು.</p>.<p>ಇಲ್ಲಿನ ಗಾಂಧಿ ಭವನದಲ್ಲಿ ಆರ್ಪಿಐ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಕಾರ್ಯಕಾರಿಣಿ ಹಾಗೂ ಬೆಳಗಾವಿ ಜಿಲ್ಲಾ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ 6 ದಶಕ ಆಡಳಿತ ನಡೆಸಿದ ಕಾಂಗ್ರೆಸ್ನವರು ಜಾತೀಯತೆ ಹೋಗಲಾಡಿಸಲಿಲ್ಲ. ಗಾಂಧೀಜಿ ಕನಸು ನುಚ್ಚುನೂರಾಗಿಸಿದರು. ಮೋದಿ ಪ್ರಧಾನಿಯಾದ ನಂತರ ಭ್ರಷ್ಟಾಚಾರ ನಿರ್ಮೂಲನೆಗೊಳಿಸಿದ್ದಾರೆ. ಹಾಗಾಗಿ ನಾವೂ ಬಿಜೆಪಿ ಜೊತೆಗಿದ್ದೇವೆ’ ಎಂದರು.</p>.<p>‘ರಾಜ್ಯದಲ್ಲಿಯೂ ಪಕ್ಷ ಸಂಘಟನೆಗೆ ಒತ್ತು ನೀಡಿದ್ದೇವೆ. ಕಾರ್ಯಕರ್ತರು ತಮಗೆ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>