ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ ಪ್ರಕರಣ: ‌ನ್ಯಾಯಾಲಯದ ಆದೇಶ ಸಿಕ್ಕ ಕೂಡಲೆ ಯುವತಿ ಹಾಜರು: ವಕೀಲ ಜಗದೀಶ್

Last Updated 30 ಮಾರ್ಚ್ 2021, 6:04 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದೆಎನ್ನಲಾದ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ನ್ಯಾಯಾಲಯದ ಆದೇಶ ಸಿಕ್ಕ ಕೂಡಲೆ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸುತ್ತೇವೆ ಎಂದುಯುವತಿ ಪರ ವಕೀಲರುನ್ಯಾಯಾಲಯಕ್ಕೆ ತೆರಳುವ ಮುನ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯಾಯಾಲಯದ ಅನುಮತಿ ಸಿಕ್ಕ ಕೂಡಲೇ, ನ್ಯಾಯಾಲಯ ಎಲ್ಲಿ ಹೇಳುತ್ತೋ ಅಲ್ಲಿ ಹಾಜರುಪಡಿಸುತ್ತೇವೆ ಎಂದು ಯುವತಿ ಪರ ವಕೀಲ ಜಗದೀಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಯುವತಿ ನ್ಯಾಯಾಲಯದ ಸಮೀಪವೇ ಇದ್ದಾರೆ. ನ್ಯಾಯಾಲಯದ ಆದೇಶದ ಅನ್ವಯ ಮುಂದುವರಿಯುತ್ತೇವೆ ಎಂದರು. ನಿನ್ನೆ ನ್ಯಾಯಾಲಯದಿಂದ ಆದೇಶ ಸಿಗದ ಕಾರಣ ಹಾಜರುಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ನಮಗೆ ಭದ್ರತೆ ನೀಡುವುದಾಗಿ ನ್ಯಾಯಾಲಯ ಮತ್ತು ಪೊಲೀಸರು ಭರವಸೆ ನೀಡಿದ್ದಾರೆ. ಹಾಗಾಗಿ, ನ್ಯಾಯಾಲಯದ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ತನಿಖಾಧಿಕಾರಿ ಹಾಜರಾದ ಬಳಿಕ ಅವರ ಸಮ್ಮುಖದಲ್ಲೇ ನ್ಯಾಯಾಲಯ ಆದೇಶ ನೀಡಲಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT