ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದು ಟ್ರಯಲ್‌, ಶನಿವಾರ ದೊಡ್ಡ ಬಾಂಬ್ ಸ್ಫೋಟ: ರಮೇಶ್ ಜಾರಕಿಹೊಳಿ

Last Updated 26 ಮಾರ್ಚ್ 2021, 17:41 IST
ಅಕ್ಷರ ಗಾತ್ರ

ಬೆಂಗಳೂರು: ‘ನಾಳೆ (ಶನಿವಾರ) ಸಂಜೆ 4 ರಿಂದ 6 ಗಂಟೆಯ ಒಳಗೆ ದೊಡ್ಡ ಬಾಂಬ್‌ ಸ್ಫೋಟವಾಗುತ್ತದೆ. ದೊಡ್ಡ ಮಟ್ಟದ ಬೆಳವಣಿಗೆ ಆಗಲಿದ್ದು, ನಾನೇ ಆಗ ಮಾತನಾಡುತ್ತೇನೆ’ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ.

‘ಇದು ಬರಿ ಟ್ರಯಲ್‌, ನಾಳೆ ಸಂಜೆಯವರೆಗೆ ಕಾಯಿರಿ ಬಾಂಬ್‌ ಸ್ಫೋಟವಾಗುತ್ತದೆ. ಆಡಿಯೊದಲ್ಲಿ ಡಿ.ಕೆ.ಶಿವಕುಮಾರ್‌ ಹೆಸರು ಪ್ರಸ್ತಾಪ ಆಗಿದೆ. ತನಿಖೆ ನಡೆಯಲಿ. ಆಡಿಯೊದಲ್ಲಿ ಹೆಸರು ಬಂದ ಮಾತ್ರಕ್ಕೆ ಡಿ.ಕೆ ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿ. ನನಗೆ ಆದ ರೀತಿ ಅನ್ಯಾಯ ಅವರಿಗೆ ಆಗಬಾರದು. ನನ್ನ ಹಾಗೆ ಅವರು ರಾಜಿನಾಮೆ ಕೊಡುವುದು ಬೇಡ’ ಎಂದರು.

‘ಶಿವಕುಮಾರ್‌ ಬಗ್ಗೆ ಆರೋಪ ಮಾಡುವುದಿಲ್ಲ. ಯಾವುದೇ ಪುರಾವೆ ಇಲ್ಲದೆ ಏನೂ ಹೇಳುವುದಿಲ್ಲ. ನಾನು ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ’ ಎಂದರು.

’ಸರ್ಕಾರವನ್ನೇ ತೆಗೆದವನು ನಾನು. ಇದೆಲ್ಲ ಯಾವ ಲೆಕ್ಕ. ಸಮ್ಮಿಶ್ರ ಸರ್ಕಾರ ಉರುಳಿಸಿ, ಬಿಜೆಪಿ ಸರ್ಕಾರ ತಂದಿದ್ದಕ್ಕೆ ಷಡ್ಯಂತ್ರ ನಡೆಸಿದ್ದಾರೆ. ಇಂತಹ ದೂರುಗಳಿಗೆಲ್ಲ ಅಂಜುವುದಿಲ್ಲ. ನನ್ನ ವಿರುದ್ಧ ನಡೆದ ಷಡ್ಯಂತ್ರದ ಎಲ್ಲ ವಿವರವನ್ನೂ ಸಂಗತಿಯನ್ನು ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT