ಬೀದರ್: ‘ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿ.ಡಿ. ಪ್ರಕರಣದ ಯುವತಿಯ ಜೀವಕ್ಕೆ ಅಪಾಯವಾಗುವ ಪರಿಸ್ಥಿತಿ ಬರಬಾರದು ಎಂದಾದರೆ ಗುಪ್ತ ಸ್ಥಳದಲ್ಲಿ ಕುಳಿತು ವಿಡಿಯೊ ಬಿಡುಗಡೆ ಮಾಡುವುದು ಬಿಡಬೇಕು. ನೇರವಾಗಿ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ರಕ್ಷಣೆ ಪಡೆಯಬೇಕು. ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲದಿದ್ದರೆ ಪ್ರಧಾನಮಂತ್ರಿಗೆ ಸಂದೇಶ ಕಳುಹಿಸಿ ರಕ್ಷಣೆ ಪಡೆಯಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕಎಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದರು.