‘ನಾನು ನೀಡಿರುವ ದೂರಿನಿಂದ ಜಾರಕಿಹೊಳಿ ಬೆಂಬಲಿಗರು ಆಕ್ರೋಶ
ಗೊಂಡಿದ್ದು, ದೂರವಾಣಿ ಕರೆಗಳ ಮೂಲಕ ನನಗೆ ಜೀವ ಬೆದರಿಕೆ ಒಡ್ಡುತ್ತಿದ್ದಾರೆ. ಅಲ್ಲದೇ ನಾನು ಓಡಾಡುವ ಸ್ಥಳಗಳಲ್ಲಿ ಅಪರಿಚಿತರ ಗುಂಪು ನನ್ನನ್ನು ಹಿಂಬಾಲಿಸುತ್ತಿದ್ದು, ನಾನು ಹಾಗೂ ನನ್ನ ಕುಟುಂಬದವರಿಗೆ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಭದ್ರತೆ ಒದಗಿಸಬೇಕು’ ಎಂದು ಕೋರಿ ಅವರು ಬುಧವಾರ ಸಂಜೆ ಕನಕಪುರ ಗ್ರಾಮೀಣ ಠಾಣೆಯಲ್ಲಿ ದೂರು ಸಲ್ಲಿಸಿದರು.