<p><strong>ಬೆಂಗಳೂರು:</strong> ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿ.ಡಿ ಪ್ರಕರಣದ ತನಿಖೆಯ ಸಮಗ್ರ ವರದಿಯನ್ನು ಇದೇ 19ರಂದು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ಶುಕ್ರವಾರ ತಿಳಿಸಿತು.</p>.<p>ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ(ಎಸ್ಐಟಿ) ರಚನೆ ಮತ್ತು ಅದು ನಡೆಸಿದ ತನಿಖೆಯ ಪ್ರಗತಿಯ ಬಗ್ಗೆ ಪ್ರಶ್ನಿಸಿದಾಗ, ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಈ ಉತ್ತರ ನೀಡಿದರು.</p>.<p>‘ಪ್ರಕರಣಕ್ಕೆ ಸಂಬಂಧಿಸಿದ ಸಮಗ್ರ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಎಸ್ಐಟಿಯು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪಾರದರ್ಶಕ ತನಿಖೆ ನಡೆಯಬೇಕೆಂದರೆ ಪ್ರಕರಣದ ತನಿಖೆಯ ಹೊಣೆಯನ್ನು ಬೇರೆ ಸಂಸ್ಥೆಗೆ ವರ್ಗಾಯಿಸಬೇಕು’ ಎಂದು ಸಂತ್ರಸ್ತ ಯುವತಿಯು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>‘ಗೃಹಸಚಿವರು ನಗರ ಪೊಲೀಸ್ ಕಮಿಷನರ್ ಅವರಿಗೆ ಬರೆದ ಪತ್ರದ ಆಧಾರದ ಮೇಲೆ ಎಸ್ಐಟಿಯನ್ನು ರಚಿಸಲಾಗಿದೆ. ರಮೇಶ ಜಾರಕಿಹೊಳಿ ಅವರ ಮನವಿಯ ಮೇರೆಗೇ ಗೃಹ ಸಚಿವರು ಈ ಪತ್ರ ಬರೆದಿದ್ದು, ತನಿಖೆಯು ಪಾರದರ್ಶಕವಾಗಿ ನಡೆದಿಲ್ಲ’ ಎಂದು ಯುವತಿ ದೂರಿದ್ದರು.</p>.<p>ಇದರ ನಂತರ, ಮತ್ತೊಂದು ಅರ್ಜಿ ಸಲ್ಲಿಸಿದ್ದ ಯುವತಿ, ‘ಸದಾಶಿವನಗರ ಠಾಣೆಯಲ್ಲಿ ರಮೇಶ ಜಾರಕಿಹೊಳಿಯವರ ಪರವಾಗಿ ಎಂ.ವಿ. ನಾಗರಾಜು ಅವರು ನೀಡಿದ್ದ ದೂರನ್ನೂ ರದ್ದು ಮಾಡಬೇಕು’ ಎಂದೂ ಕೋರಿದ್ದರು. ಈ ಎರಡೂ ಅರ್ಜಿಗಳ ವಿಚಾರಣೆಯು ಶುಕ್ರವಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿ.ಡಿ ಪ್ರಕರಣದ ತನಿಖೆಯ ಸಮಗ್ರ ವರದಿಯನ್ನು ಇದೇ 19ರಂದು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ಶುಕ್ರವಾರ ತಿಳಿಸಿತು.</p>.<p>ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ(ಎಸ್ಐಟಿ) ರಚನೆ ಮತ್ತು ಅದು ನಡೆಸಿದ ತನಿಖೆಯ ಪ್ರಗತಿಯ ಬಗ್ಗೆ ಪ್ರಶ್ನಿಸಿದಾಗ, ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಈ ಉತ್ತರ ನೀಡಿದರು.</p>.<p>‘ಪ್ರಕರಣಕ್ಕೆ ಸಂಬಂಧಿಸಿದ ಸಮಗ್ರ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಎಸ್ಐಟಿಯು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪಾರದರ್ಶಕ ತನಿಖೆ ನಡೆಯಬೇಕೆಂದರೆ ಪ್ರಕರಣದ ತನಿಖೆಯ ಹೊಣೆಯನ್ನು ಬೇರೆ ಸಂಸ್ಥೆಗೆ ವರ್ಗಾಯಿಸಬೇಕು’ ಎಂದು ಸಂತ್ರಸ್ತ ಯುವತಿಯು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>‘ಗೃಹಸಚಿವರು ನಗರ ಪೊಲೀಸ್ ಕಮಿಷನರ್ ಅವರಿಗೆ ಬರೆದ ಪತ್ರದ ಆಧಾರದ ಮೇಲೆ ಎಸ್ಐಟಿಯನ್ನು ರಚಿಸಲಾಗಿದೆ. ರಮೇಶ ಜಾರಕಿಹೊಳಿ ಅವರ ಮನವಿಯ ಮೇರೆಗೇ ಗೃಹ ಸಚಿವರು ಈ ಪತ್ರ ಬರೆದಿದ್ದು, ತನಿಖೆಯು ಪಾರದರ್ಶಕವಾಗಿ ನಡೆದಿಲ್ಲ’ ಎಂದು ಯುವತಿ ದೂರಿದ್ದರು.</p>.<p>ಇದರ ನಂತರ, ಮತ್ತೊಂದು ಅರ್ಜಿ ಸಲ್ಲಿಸಿದ್ದ ಯುವತಿ, ‘ಸದಾಶಿವನಗರ ಠಾಣೆಯಲ್ಲಿ ರಮೇಶ ಜಾರಕಿಹೊಳಿಯವರ ಪರವಾಗಿ ಎಂ.ವಿ. ನಾಗರಾಜು ಅವರು ನೀಡಿದ್ದ ದೂರನ್ನೂ ರದ್ದು ಮಾಡಬೇಕು’ ಎಂದೂ ಕೋರಿದ್ದರು. ಈ ಎರಡೂ ಅರ್ಜಿಗಳ ವಿಚಾರಣೆಯು ಶುಕ್ರವಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>