ಬೆಂಗಳೂರು: 'ಅತ್ಯಾಚಾರದ ಪ್ರಕರಣದ ಸಂತ್ರಸ್ತೆಯಾದ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೇಳಿಕೆ ದಾಖಲಿಸಲು ಅನುಮತಿ ಸಿಕ್ಕಿದೆ. ಇಂದು ಮಧ್ಯಾಹ್ನವೇ ಯುವತಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ' ಎಂದು ಯುವತಿ ಪರ ವಕೀಲ ಕೆ.ಎನ್. ಜಗದೀಶ್ಕುಮಾರ್ ತಿಳಿಸಿದರು.
ನ್ಯಾಯಾಲಯ ಕಲಾಪ ಮುಗಿಸಿ ಹೊರಬಂದ ಅವರು, 'ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಮ್ಮ ಪರವಾಗಿ ಆದೇಶ ನೀಡಿದೆ. ಸಿಆರ್ಪಿಸಿ 164ರ ಅಡಿ ಹೇಳಿಕೆ ದಾಖಲಿಸಿಕೊಳ್ಳಲು ಅನುಮತಿ ಸಿಕ್ಕಂತಾಗಿದೆ' ಎಂದರು.
'ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಸದ್ಯದಲ್ಲೇ ಯುವತಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಲಿದ್ದಾರೆ' ಎಂದೂ ಹೇಳಿದರು.