ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿರುವ ಅವರು, ಮುಂಬೈನಲ್ಲಿ ಮಹಾರಾಷ್ಟ್ರದ ವಿಧಾನಸಭೆ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವಿಸ್ ಅವರೊಂದಿಗೆ ಈಚೆಗೆ ಮಾತುಕತೆ ನಡೆಸಿದ್ದರು. ನಾಗಪುರದ ಆರ್ಎಸ್ಎಸ್ ಕಚೇರಿಗೂ ಭೇಟಿ ನೀಡಿದ್ದರು. ಶುಕ್ರವಾರ ಮೈಸೂರಿನಲ್ಲಿ ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನೂ ಭೇಟಿಯಾಗಿದ್ದರು. ಈಗ, ಆರ್ಎಸ್ಎಸ್ ಪ್ರಭಾವಿ ಮುಖಂಡರೊಂದಿಗೆ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.