ಬೆಂಗಳೂರು: ‘ಸಿ.ಡಿ ಪ್ರಕರಣದಲ್ಲಿನ ಸಂತ್ರಸ್ತ ಯುವತಿ ಇದುವರೆಗೆ ನನ್ನನ್ನು ಭೇಟಿಯಾಗಿಲ್ಲ. ಈಗಲೂ ನನ್ನನ್ನು ಭೇಟಿಯಾದರೆ ಆಕೆಗೆ ಸಹಾಯ ಮಾಡಲು ಸಿದ್ಧ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಪ್ರತಿದಿನ ಮನೆ, ಕಚೇರಿಗೆ ಸಾವಿರಾರು ಜನ ನನ್ನನ್ನು ಭೇಟಿಯಾಗಲು ಬರುತ್ತಾರೆ. ಆ ಯುವತಿ ಕೂಡಾ ಭೇಟಿ ಮಾಡಲು ಯತ್ನಿಸಿರಬಹುದು’ ಎಂದರು.
‘ನರೇಶ್ ನನ್ನ ಆಪ್ತ. ಮಾಧ್ಯಮದಲ್ಲಿ ಇದ್ದವನು. ನನಗೆ ಬಹಳ ಪರಿಚಯ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ನನ್ನನ್ನು ಸಂಪರ್ಕಿಸಿಲ್ಲ. ಸಹಾಯ ಕೇಳಿಲ್ಲ’ ಎಂದು ಸ್ಪಷ್ಟಪಡಿಸಿದರು.