ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ.ಪ್ರಕರಣ: ಸಂತ್ರಸ್ತೆ ಯುವತಿ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು

Last Updated 30 ಮಾರ್ಚ್ 2021, 10:09 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ. ಪ್ರಕರಣ ಯುವತಿ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದ್ದು, ಹೇಳಿಕೆ ದಾಖಲು ಪ್ರಕ್ರಿಯೆ ಆರಂಭವಾಗಿದೆ.

ಒಂದೇ ಕಾರಿನಲ್ಲೇ ಯುವತಿಯನ್ನು ನ್ಯಾಯಾಲಯ ಬಳಿ‌ ಕರೆತರಲಾಗಿದ್ದು, ನಂತರ ನಡೆದುಕೊಂಡು ಯುವತಿ‌ ನ್ಯಾಯಾಲಯದೊಳಗೆ ಹೋಗಿದ್ದಾರೆ. ಸದ್ಯ ಯುವತಿ, ನ್ಯಾಯಾಲಯದೊಳಗೆ ಇದ್ದಾರೆ.

ಈ ಬಗ್ಗೆ ಮಾತನಾಡಿದ ಯುವತಿ‌ ಪರ‌ ವಕೀಲ ಕೆ.ಎನ್. ಜಗದೀಶ್‌ಕುಮಾರ್, ‘ಯುವತಿ ನ್ಯಾಯಾಲಯದಲ್ಲಿ‌ ಇದ್ದಾರೆ.ಮಧ್ಯಾಹ್ನ 3ಕ್ಕೆ ಕಲಾಪ‌ ಆರಂಭವಾಗಿದ್ದು, ನ್ಯಾಯಾಧೀಶರೇ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ’ ಎಂದರು.

‘ಯುವತಿ‌ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ತಮಗಾದ ಅನ್ಯಾಯವನ್ನು ನ್ಯಾಯಾಲಯದ ಮುಂದೆ ಹೇಳಲಿದ್ದಾರೆ’ ಎಂದೂ ತಿಳಿಸಿದರು.

ಎಸ್ಐಟಿ ಮುಖ್ಯಸ್ಥ ಸೌಮೇಂದು‌ ಮುಖರ್ಜಿ, ಜಂಟಿ‌ ಕಮಿಷನರ್ ಸಂದೀಪ್ ಪಾಟೀಲ ಹಾಗೂ ಹಲವರೂ ನ್ಯಾಯಾಲಯಕ್ಕೆ‌ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT